News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

751

ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ಆಭರಣ ತಯಾರಕರಿಗೆ ಬಹಳಷ್ಟು ಅವಕಾಶ ಒದಗುತ್ತವೆ. ಆಭರಣ ನವೀಕರಿಸುವವರಿಗೆ ಉತ್ತಮ ವ್ಯಾಪಾರ ಮತ್ತು ಲಾಭ. ಮಕ್ಕಳನ್ನು ಅಲಕ್ಷಿಸಲು ಮುಂದಾಗಬೇಡಿ. ಅವರೊಡನೆ ಸ್ನೇಹದಿಂದ ಮಾತನಾಡಿ ಅವರ ವಿಶ್ವಾಸವನ್ನು ಪಡೆಯಿರಿ.

 

ವೃಷಭ:-

ಸಂಹವನ ವಲಯದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಮಿಥುನ:

ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ. ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು.

ಕಟಕ :-

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ದೊರೆಯುತ್ತದೆ.

 ಸಿಂಹ:

ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಕನ್ಯಾ :-

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ.

ತುಲಾ:

ನಿಮಗೆ ಸಾಧನೆ ಮಾಡಲು ಮನಸ್ಸಾಗುತ್ತದೆ. ಸ್ಥಿರಾಸ್ತಿ ಖರೀದಿಸಲು ಯೋಜನೆ ರೂಪಿಸುತ್ತೀರಿ. ನಿಮ್ಮ ಹಠಮಾರಿ ಸ್ವಭಾವದಿಂದ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ. ಈ ವಾರ ನೀವು ಹೆಣೆಯುವ ತಂತ್ರಗಳು ನಿಮಗೆ ಮುಳುವಾಗಲಿವೆ.

 

ವೃಶ್ಚಿಕ :-

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು.

ಧನಸ್ಸು:

ನಿಮ್ಮ ಮೇಲಧಿಕಾರಿಗಳು ಬಹಳ ವಿಶ್ವಾಸವನ್ನು ಇಟ್ಟುಕೊಳ್ಳುವರು. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ.

ಮಕರ :-

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ. ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಲಿದೆ. ಅವರ ಸಂಭಾವನೆಯಲ್ಲಿ ಏರಿಕೆ. ಶಿಕ್ಷಕರಿಗೆ ಗೌರವ ದೊರೆಯುತ್ತದೆ.

ಕುಂಭ:-

ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.

ಮೀನ:-

ವೃತ್ತಿಯ ಬಡ್ತಿ ಪಡೆಯಲು ಹಿರಿಯ ಅಧಿಕಾರಿಗಳ ಸಹಾಯ ಪಡೆಯುವಿರಿ. ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಕರ್ನಾಟಕ

    ರೆಡಿಯಾಯ್ತು ದೇಶದ ಅತ್ಯಂತ ದೊಡ್ಡದಾದ ಮೆಟ್ರೋ ನಿಲ್ದಾಣ…

    ಕೆಂಪೇಗೌಡ ಇಂಟರ್‌ಚೇಂಜ್‌  ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…