ಜ್ಯೋತಿಷ್ಯ

ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

748

ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ಆಭರಣ ತಯಾರಕರಿಗೆ ಬಹಳಷ್ಟು ಅವಕಾಶ ಒದಗುತ್ತವೆ. ಆಭರಣ ನವೀಕರಿಸುವವರಿಗೆ ಉತ್ತಮ ವ್ಯಾಪಾರ ಮತ್ತು ಲಾಭ. ಮಕ್ಕಳನ್ನು ಅಲಕ್ಷಿಸಲು ಮುಂದಾಗಬೇಡಿ. ಅವರೊಡನೆ ಸ್ನೇಹದಿಂದ ಮಾತನಾಡಿ ಅವರ ವಿಶ್ವಾಸವನ್ನು ಪಡೆಯಿರಿ.

 

ವೃಷಭ:-

ಸಂಹವನ ವಲಯದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಮಿಥುನ:

ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ. ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು.

ಕಟಕ :-

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ದೊರೆಯುತ್ತದೆ.

 ಸಿಂಹ:

ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಕನ್ಯಾ :-

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ.

ತುಲಾ:

ನಿಮಗೆ ಸಾಧನೆ ಮಾಡಲು ಮನಸ್ಸಾಗುತ್ತದೆ. ಸ್ಥಿರಾಸ್ತಿ ಖರೀದಿಸಲು ಯೋಜನೆ ರೂಪಿಸುತ್ತೀರಿ. ನಿಮ್ಮ ಹಠಮಾರಿ ಸ್ವಭಾವದಿಂದ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ. ಈ ವಾರ ನೀವು ಹೆಣೆಯುವ ತಂತ್ರಗಳು ನಿಮಗೆ ಮುಳುವಾಗಲಿವೆ.

 

ವೃಶ್ಚಿಕ :-

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು.

ಧನಸ್ಸು:

ನಿಮ್ಮ ಮೇಲಧಿಕಾರಿಗಳು ಬಹಳ ವಿಶ್ವಾಸವನ್ನು ಇಟ್ಟುಕೊಳ್ಳುವರು. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ.

ಮಕರ :-

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ. ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಲಿದೆ. ಅವರ ಸಂಭಾವನೆಯಲ್ಲಿ ಏರಿಕೆ. ಶಿಕ್ಷಕರಿಗೆ ಗೌರವ ದೊರೆಯುತ್ತದೆ.

ಕುಂಭ:-

ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.

ಮೀನ:-

ವೃತ್ತಿಯ ಬಡ್ತಿ ಪಡೆಯಲು ಹಿರಿಯ ಅಧಿಕಾರಿಗಳ ಸಹಾಯ ಪಡೆಯುವಿರಿ. ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…