ರಾಜಕೀಯ

ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮಿ ಯಾರಿಗೆ..?ಈ ವರದಿಯಲ್ಲಿ ಏನಿದೆ ಗೊತ್ತಾ..?

455

ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ. ಇನ್ನು ಒಂದು ಬಾರಿ ಬಿಜೆಪಿಗೆ ಒಲಿದಿದ್ದರೆ ಮತ್ತೊಂದು ಬಾರಿ ಕಾಂಗ್ರೆಸ್‍ಗೆ ಒಲಿದಿದೆ.

ಇನ್ನು ಯಶವಂತಪುರ ಕ್ಷೇತ್ರದ ರಾಜಕೀಯ ಇತಿಹಾಸ ಕೆದಕಿನೋಡಿದರೆ, ಕ್ಷೇತ್ರ ಪುನರ್‍ವಿಂಗಡಣೆ ನಂತರ 2008ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದರು.

2008 ಮತ್ತು 2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜವರಾಯಿಗೌಡ ಅವರು ಇದುವರೆಗೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಮೂರನೆ ಅವಧಿಯಲ್ಲೂ ಜವರಾಯಿಗೌಡ ಅವರೇ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ಇನ್ನು 2013ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೌಡ ಅವರು 1,20,380 ಮತಗಳನ್ನು ಪಡೆದು ಜೆಡಿಎಸ್‍ನ ಜವರಾಯಿಗೌಡ ಅವರಿಗಿಂತ 29,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕ ಎಸ್.ಟಿ.ಸೋಮಶೇಖರ್‍ಗೌಡ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಕ್ಷೇತ್ರದ ಜನರ ಪ್ರಕಾರ ಸೋಮಶೇಖರ್ ಅವರು ಶಾಸಕರಾಗಿ ಆಯ್ಕೆಯಾದ ನಂತರ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಾಗಿವೆ. ಹೀಗಾಗಿ ಈ ಬಾರಿಯೂ ಕ್ಷೇತ್ರದ ಮತದಾರರು ಮತ್ತೊಮ್ಮೆ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸದಲ್ಲಿ ಅವರು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಇನ್ನು ಬಿಜೆಪಿ ಪಕ್ಷದಿಂದ ಯಶವಂತಪುರ ಕ್ಷೇತ್ರವನ್ನು ತಮ್ಮ ಕಪಿಮುಷ್ಟಿಗೆ ಪಡೆಯಲು ಪಕ್ಷ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಡುವುದು ಪಕ್ಕ ಎಂದು ಹೇಳಲಾಗುತ್ತಿದೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ