ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1715

ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

    ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…