ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1674

ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಕರ್ನಾಟಕ

    ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

    ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗಳು ಇವೆಯೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…