ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ. ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.