News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

670

ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ.

ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ ರಾಜ್ಯಕ್ಕೆ ಸಂಭಂದಪಡುವುದಿಲ್ಲ.

ಅಷ್ಟಕ್ಕೂ ಈ ಕಾನೂನು ರಚನೆಯಾದದ್ದು ಏಕೆ ಗೊತ್ತಾ? ತಿಳಿಯಲು ಮುಂದೆ ಓದಿ…

ನಿಮಗೆ ಗೊತ್ತಾ 370ನೇ ವಿಧಿ ಕಾನೂನು ಏನು ಹೇಳುತ್ತೆ ಅಂತ ?

 ಯಾವುದೇ ಒಂದು ರಾಜ್ಯಕ್ಕೆ ತಾತ್ಕಾಲಿಕವಾಗಿ ವಿಶೇಷ ಸ್ಥಾನಮಾನ ಕಲ್ಪಿಸಲು ಭಾರತದ ಸಂವಿಧಾನದ 21ನೇ ಪರಿಚ್ಛೇದ ಅನ್ವಯವಾಗುತ್ತದೆ. ಪ್ರಾಂತೀಯ ಸರಕಾರಕ್ಕೆ ಸಾಕಷ್ಟು ಅಧಿಕಾರವನ್ನು ದಯಪಾಲಿಸುವ ವಿಧಿಯೇ 370. ಇದರ ಪ್ರಕಾರ ಒಂದು ಪ್ರಾಂತ್ಯಕ್ಕೆ ತಾತ್ಕಾಲಿಕವಾಗಿ (ಆ ಸಂದರ್ಭಕ್ಕೆ ಅಗತ್ಯವಿದ್ದಂತೆ) ವಿಶೇಷ ಸ್ಥಾನಮಾನವನ್ನು ಕಲ್ಪಿಸಬಹುದು. ಅಂತಹ ಸ್ಥಾನ ಪಡೆದ ರಾಜ್ಯ, ದೇಶದ ಎಲ್ಲ ರಾಜ್ಯಗಳಿಗೂ ಅನ್ವಯವಾಗುವ ಕಾನೂನಿನಿಂದ ಮುಕ್ತ. ಕೆಲವು ಕ್ಷೇತ್ರಗಳ ಹೊರತಾಗಿ ಉಳಿದೆಲ್ಲ ವಿಚಾರಗಳನ್ನು ಅಲ್ಲಿನ ವಿಧಾನಸಭೆಗೇ ಬಿಡಬೇಕು.

ಈ ಸೌಲಭ್ಯ ಜಾರಿಗೆಯಾಗಿದ್ದು ಯಾವಾಗ ?

ಈ ಸೌಲಭ್ಯ ಜಾರಿಗೆ ಬಂದಿದ್ದು, 1947ರಲ್ಲಿ. ಆಗ ಶೇಖ್ ಅಬ್ದುಲ್ಲಾ ಎಂಬುವರನ್ನು ಜಮ್ಮು ಕಾಶ್ಮೀರದ ಪ್ರಧಾನಿಯಾಗಿ ಮಹಾರಾಜಾ ಹರಿಸಿಂಗ್ ಹಾಗೂ ಜವಾಹರಲಾಲ್ ನೆಹರು ನೇಮಿಸಿದ್ದರು. ಅಂದು ರಾಜ್ಯದ ಪ್ರಧಾನಿಯಾಗಿ ಹೊಂದಿದ್ದ ಸ್ವಾಯತ್ತತೆಯನ್ನು ಎಲ್ಲ ಸಮಯಕ್ಕೂ ಉಳಿಸಿಕೊಳ್ಳುವ ಉದ್ದೇಶ ಹೊಂದಿದ್ದ ಅಬ್ದುಲ್ಲಾ 370ನೇ ವಿಧಿಯನ್ನು ಶಾಶ್ವತಗೊಳಿಸಬೇಕೆಂದು ವಾದಿಸಿದ್ದ. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಕೊಂಡಿರಲಿಲ್ಲ.

ಜಮ್ಮು ಕಾಶ್ಮೀರಕ್ಕೆ ನೀಡಲಾಯಿತು?

1947ರ ಆಗಸ್ಟ್ 14, 15ರಂದು ಕ್ರಮವಾಗಿ ಭಾರತ ಮತ್ತು ಪಾಕಿಸ್ತಾನ ಸ್ವತಂತ್ರಗೊಂಡವು. ಆ ವೇಳೆ ಕಾಶ್ಮೀರವನ್ನು ಒಂದು ಸ್ವತಂತ್ರ ರಾಜ್ಯವನ್ನಾಗಿ ಘೋಷಿಸಲಾಗಿತ್ತು. ಆ ರಾಜ್ಯದ ಮೇಲೆ ಎರಡೂ ದೇಶಗಳು ದಾಳಿ ಮಾಡಬಾರದೆಂಬ ನಿರ್ಣಯ ಕೈಗೊಳ್ಳಲಾಯಿತು. ಆದರೆ ಪಾಕಿಸ್ತಾನ ಕಾಶ್ಮೀರವನ್ನು ತನ್ನದಾಗಿಸಿಕೊಳ್ಳಬೇಕೆಂಬ ಪ್ರಯತ್ನವನ್ನು ಕೈಬಿಡಲಿಲ್ಲ.

1947 ಅ. 6ರಂದು ಪಾಕ್ ಬೆಂಬಲಿತ ‘ಆಜಾದ್ ಕಾಶ್ಮೀರ್’ ಎಂಬ ಪಡೆಯು ಪಾಕ್ ಮೇಲೆ ಮುಗಿಬಿತ್ತು. ಆಗ ಕಾಶ್ಮೀರವನ್ನು ಆಳುತ್ತಿದ್ದ ಮಹಾರಾಜ ಹರಿಸಿಂಗ್ ತಮ್ಮ ರಾಜ್ಯವನ್ನು ರಕ್ಷಿಸುವಂತೆ ಭಾರತವನ್ನು ಕೋರಿದರು. ಕಾಶ್ಮೀರವನ್ನು ಭಾರತಕ್ಕೆ ಸಂಪೂರ್ಣವಾಗಿ ಒಪ್ಪಿಸಿದರೆ ನೆರವು ನೀಡುವುದಾಗಿ ಆಗ ಭಾರತ ಸರಕಾರ ಹೇಳಿತ್ತು. ಇದಕ್ಕೆ ಹರಿಸಿಂಗ್ ಸುತರಾಂ ಒಪ್ಪಲಿಲ್ಲ.

ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿದ ಅಂದಿನ ಪ್ರಧಾನಿ ಪಂಡಿತ್ ಜವಹರ್‌ಲಾಲ್ ನೆಹರೂ ಒಂದು ಒಪ್ಪಂದಕ್ಕೆ ಬಂದರು. ”ಭಾರತದೊಂದಿಗೆ ಜಮ್ಮು ಕಾಶ್ಮೀರ ವಿಲೀನವಾಗಬೇಕು, ಭಾರತದ ಸಂವಿಧಾನದ 370ನೇ ವಿಧಿ ಪ್ರಕಾರ ರಕ್ಷಣೆ, ವಿದೇಶಾಂಗ ಮತ್ತು ಸಂವಹನ ಕ್ಷೇತ್ರಗಳ ಹೊರತಾಗಿ ಇನ್ಯಾವುದೇ ವಿಷಯದಲ್ಲಿ ಭಾರತದ ಕಾನೂನುಗಳು ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ.” ಆ ಕರಾರುಗಳಿಗೆ ಸಹಿ ಬಿದ್ದಾಗಿನಿಂದ ಜಮ್ಮು ಕಾಶ್ಮೀರಕ್ಕೆ 370ನೇ ವಿಧಿ ಅನ್ವಯವಾಗಿದೆ.

ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ..?

ಪ್ರತಿ ವಿಷಯದಲ್ಲಿಯೂ ಪ್ರತ್ಯೇಕ ಹೆಜ್ಜೆ ತುಳಿಯಲು ಕಾನೂನುಬದ್ಧ ಅಧಿಕಾರ ಹೊಂದಿರುವ ಕಾಶ್ಮೀರ ಈಗ ಕೈಲಿದ್ದರೂ ಇಲ್ಲದ ಸ್ಥಿತಿ. ಏಕೆಂದರೆ ಸಂವಿಧಾನದ 238ನೇ ವಿಧಿ ಬೇರೆಲ್ಲಾ ರಾಜ್ಯಗಳಿಗೆ ಅನ್ವಯವಾದರೂ ಜಮ್ಮು- ಕಾಶ್ಮೀರಕ್ಕಲ್ಲ. ಆ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಸಂಸತ್‌ಗಿಲ್ಲ.

ಒಂದು ವೇಳೆ ಸಂಸತ್ ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸಲೇಬೇಕೆಂದಿದ್ದರೆ ಅದನ್ನು ರಾಷ್ಟ್ರಪತಿ ಮೂಲಕ ರಾಜ್ಯ ಸರಕಾರಕ್ಕೆ ಮುಟ್ಟಿಸಿ ಆ ರಾಜ್ಯದ ವಿಧಾನಸಭೆಯಲ್ಲಿ ಮಂಡನೆ ಮಾಡಬೇಕು. ಜತೆಗೆ ಕೆಲವು ಕಾನೂನುಗಳನ್ನು ಅಲ್ಲಿನ ಸರಕಾರದ ಅನುಮತಿ ಪಡೆದು ಸಂಸತ್‌ನಲ್ಲಿ ಮಂಡನೆ ಮಾಡಬಹುದು.

ಭಾರತದ ಸಂವಿಧಾನವೇ ಒಂದಾದರೆ ಕಾಶ್ಮೀರಕ್ಕೇ ಪ್ರತ್ಯೇಕ ಸಂವಿಧಾನ..!

ಅಂದರೆ, ಭಾರತದ ಸಂವಿಧಾನವೇ ಒಂದಾದರೆ ಕಾಶ್ಮೀರಕ್ಕೇ ಪ್ರತ್ಯೇಕ ಸಂವಿಧಾನ. ಅದರ ತಿದ್ದುಪಡಿಯಾಗುವುದೂ ಆ ರಾಜ್ಯದ ವಿಧಾನಸಭೆಯಲ್ಲಿ. ಅಲ್ಲಿ ಕೈಗೊಳ್ಳಲಾಗವ ನಿರ್ಧಾರಗಳನ್ನು ಆ ರಾಜ್ಯ ಸರಕಾರದ ಅನುಮತಿ ಪಡೆದು ರಾಷ್ಟ್ರಪತಿ ಸಹಿ ಹಾಕಬೇಕಾಗುತ್ತದೆ. ಈ ರೀತಿ ಪ್ರತ್ಯೇಕ ಸಂವಿಧಾನ ಹೊಂದಿರುವ ಏಕೈಕ ರಾಜ್ಯ ಜಮ್ಮು ಕಾಶ್ಮೀರ. 1957ರ ಜನವರಿ 26ರಂದು ಅಲ್ಲಿನ ವಿಧಾನಸಭೆ ಪ್ರತ್ಯೇಕ ಸಂವಿಧಾನವನ್ನು ಅಂಗೀಕರಿಸಿತು.

ಕಾಶ್ಮೀರಕ್ಕೆ ತುರ್ತು ಪರಿಸ್ಥಿತಿಯೂ ಅನ್ವಯವಾಗುವುದಿಲ್ಲ…

ಸಂವಿಧಾನದ ವಿಧಿ 360ರ ಪ್ರಕಾರ ಕೇಂದ್ರ ಸರಕಾರ ದೇಶಾದ್ಯಂತ ಆರ್ಥಿಕ ತುರ್ತುಸ್ಥಿತಿ ಘೋಷಿಸುವ ವಿಶೇಷ ಅಧಿಕಾರ ಹೊಂದಿರುತ್ತದೆ. ಆದರೆ, ಆರ್ಥಿಕ ತುರ್ತುಸ್ಥಿತಿಯನ್ನು ಈ ರಾಜ್ಯದಲ್ಲಿ ಘೋಷಿಸುವಂತಿಲ್ಲ. ಹೊರ ದೇಶಗಳು ಅತಿಕ್ರಮಣ ನಡೆಸಿದಾಗ ಇಲ್ಲವೇ ಯುದ್ಧದ ಸಮಯದಲ್ಲಿ ಮಾತ್ರ ತುರ್ತುಸ್ಥಿತಿ ಘೊಷಿಸಬಹುದು.

ದೇಶದಲ್ಲಿ ಆಂತರಿಕ ಸಮಸ್ಯೆಗಳು ತಲೆದೋರಿದ ಸಮಯದಲ್ಲಿ ಜಮ್ಮು ಕಾಶ್ಮೀರ ತುರ್ತುಸ್ಥಿತಿಯಂತಹ ಸನ್ನಿವೇಶದಿಂದ ಮುಕ್ತವಾಗಿರುತ್ತದೆ. ಹಾಗೊಂದು ವೇಳೆ ಈ ರಾಜ್ಯದಲ್ಲಿ ತುರ್ತುಸ್ಥಿತಿ ಘೋಷಣೆಯಾಗಲೇಬೇಕೆಂದರೆ ಅದಕ್ಕೆ ಅಲ್ಲಿನ ರಾಜ್ಯ ಸರಕಾರದ ಅನುಮತಿ ಬೇಕು. ರಾಷ್ಟ್ರಪತಿಯಾದವರು ಆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಅಲ್ಲಿನ ಸರಕಾರಕ್ಕೆ ಕೋರಿಕೆ ಸಲ್ಲಿಸಬೇಕು.

ಇಲ್ಲಿನ ನಿಯಮಗಳಿಂದ ಈ ರಾಜ್ಯದವರು ಅನುಭವಿಸುತ್ತಿರುವ ಸಮಸ್ಯಗಳೇನು?

ಬೇರೆ ರಾಜ್ಯದಿಂದ ಬಂದವರು ಈ ರಾಜ್ಯದಲ್ಲಿ ಆಸ್ತಿ ಖರೀದಿಸುವಂತಿಲ್ಲ. ಆದರೆ, ಈ ರಾಜ್ಯದವರು ಭಾರತದ ಬೇರೆ ರಾಜ್ಯಗಳಲ್ಲಿ ಆಸ್ತಿ ಖರೀದಿಸಬಹುದು.ಈ ನಿಯಮವೇ ಜಮ್ಮು ಕಾಶ್ಮೀರವು ಭಾರತದಿಂದ ಬೇರೆ ಎಂಬ ಭಾವನೆ ಬೆಳೆಯಲು ಕಾರಣವಾಗಿದೆ. ಅಲ್ಲಿನವರಿಗೆ ಕೂಡ ತಾವು ಸಂಪೂರ್ಣ ಭಾರತೀಯರು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ರಾಜ್ಯದ ಹೊರತಾಗಿ ಬೇರೆಯವರು ಬಂಡವಾಳ ತೊಡಗಿಸಲು ಅವಕಾಶವಿಲ್ಲದ ಕಾರಣ ಇಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಇದಕ್ಕಾಗಿಯೇ ಸ್ಥಳೀಯರು ಶಸ್ತ್ರ ಕೈಗೆತ್ತಿಕೊಂಡು ಉಗ್ರರಾಗುತ್ತಿದ್ದಾರೆಂದು ವರದಿ ಹೇಳುತ್ತದೆ.

ಸ್ವಾತಂತ್ರ್ಯ ಬಂದಾಗಿನಿಂದ ಶಿಕ್ಷಣದ ಹಕ್ಕನ್ನು ಬಿಟ್ಟರೆ ಇನ್ಯಾವ ಹಕ್ಕೂ ಈ ರಾಜ್ಯದಲ್ಲಿ ಜಾರಿಯಾಗಿಲ್ಲ. ಮತ್ತೊಂದು ವಿಚಾರವೆಂದರೆ ಈ ರಾಜ್ಯದ ನಾಗರಿಕನಾದವನು ತೆರಿಗೆ ಕಟ್ಟಬೇಕಾಗಿಲ್ಲ. ದೇಶದ ಎಲ್ಲಾ ಹೈಕೋರ್ಟುಗಳು ಸಂವಿಧಾನದ ವಿಧಿ 226ರ ಪ್ರಕಾರ ಕಾನೂನು ತಿದ್ದುಪಡಿ ಮಾಡುವ ಅಧಿಕಾರವನ್ನು ಹೊಂದಿವೆ. ಆದರೆ, ಜಮ್ಮು ಕಾಶ್ಮೀರ ಹೈಕೋರ್ಟ್ ಮಾತ್ರ ಇದರಿಂದ ಮುಕ್ತ.

ಯಾವ ಕಾನೂನುಗಳನ್ನೂ ಅಸಾಂವಿಧಾನಿಕ ಎಂದು ಘೋಷಿಸುವ ಹಕ್ಕೇ ಇಲ್ಲಿನ ಕೋರ್ಟ್‌ಗೆ ಇಲ್ಲ. ಈ ರಾಜ್ಯದ ಶಾಶ್ವತ ನಾಗರಿಕರು ಮಾತ್ರ ರಾಜ್ಯ ಸರಕಾರದ ಸೇವೆಗಳಿಗೆ ಅರ್ಹರು. ಶಾಶ್ವತ ನಾಗರಿಕರಿಗೆ ಮಾತ್ರ ಆಸ್ತಿ ಖರೀದಿಸುವ ಹಕ್ಕಿದೆ. ವಿದ್ಯಾರ್ಥಿವೇತನ, ಹಿಂದುಳಿದ ವರ್ಗದವರಿಗೆ ಮೀಸಲಾತಿ ಈ ಎಲ್ಲ ವಿಚಾರದಲ್ಲಿ ಜಮ್ಮು ಕಾಶ್ಮೀರ ವಿಧಾನಸಭೆ ನಿರ್ಣಯವೇ ಅಂತಿಮ. ಒಂದು ವೇಳೆ ರಾಷ್ಟ್ರಪತಿ ಆಡಳಿತ ಹೇರಬೇಕೆಂದರೂ, ರಾಷ್ಟ್ರಪತಿ ಜಮ್ಮು ಕಾಶ್ಮೀರದ ಗವರ್ನರ್ ಅನುಮತಿ ಪಡೆಯಬೇಕು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೇವಲ ಕೆಲವೇ ದಿನಗಳಲ್ಲಿ ನಿಮ್ಮ ದೇಹದ ತೂಕ ಕಡಿಮೆಯಾಗುತ್ತೆ ಈ ಒಂದು ಚಮಚ ಜೀರಿಗೆಯಿಂದ..!ಹೇಗೆಂದು ತಿಳಿಯಲು ಈ ಮಾಹಿತಿ ನೋಡಿ…

    ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…