ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಸಮೀಕ್ಷೆ ಏನು ಹೇಳುತ್ತೆ…

ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.
ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ 2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.
ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.
ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.
2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.
ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?
ಸಿದ್ದರಾಮಯ್ಯನವರು:- ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:- ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :- ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.
ಶೇ 4ರಷ್ಟು ಮಂದಿ ಮಾತ್ರ ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.
ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-

ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.
ಬಿಎಸ್ ಯಡಿಯೂರಪ್ಪ: ಶೇ 27
ಎಚ್. ಡಿ ಕುಮಾರಸ್ವಾಮಿ : ಶೇ 18
ನಮಗೆ ಗೊತ್ತಿಲ್ಲ : ಶೇ 6
ಇತರೆ : ಶೇ 3 ರಷ್ಟು ಮತಗಳು ಬಂದಿವೆ.
ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-
ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು
ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28
ಕುಮಾರ ಸ್ವಾಮಿ ಅವರ ಸರ್ಕಾರ : ಶೇ 18
ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10
ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?
ಸಂಫೂರ್ಣ ತೃಪಿದಾಯಕ : ಶೇ 18
ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53
ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….