ಜೀವನಶೈಲಿ

ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

6648

ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.ಉದ್ಯೋಗಿಗಳಾದರೆ ತಾವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಿ ಮುಂದೆ ಸಾಗುತ್ತಾರೆ. ಆ ಸೂಚನೆಗಳು ಏನೂ ಅಂತ ಈಗ ತಿಳಿದುಕೊಳ್ಳೋಣ,

1. ಹಿರಿಯರ ಆಶೀರ್ವಾದ

ಮನೆಯಿಂದ ಹೊರಗೆ ಹೋಗುವಾಗ ಯಾರೇ ಆಗಿರಲಿ ನಮಗಿಂತ ದೊಡ್ಡವರ ಆಶೀರ್ವಾದ ಪಡೆಯಬೇಕು. ಆಶೀರ್ವಾದ ಪಡೆಯಬೇಕಾದ ಸಮಯದಲ್ಲಿ  ಬಾಗುತ್ತಾರಾದ್ದರಿಂದ, ಆ ಸ್ಥಿತಿಯಲ್ಲಿ ರಕ್ತ ಸಂಚಲನೆ ಮಿದುಳಿಗೆ ಹೆಚ್ಚಾಗಿ ಆಗಿ ಆ ಭಾಗ ಶಾರ್ಪ್ ಆಗುತ್ತದೆ. ಇದರಿಂದ ಆಲೋಚನಾ ಶಕ್ತಿ ಹೆಚ್ಚುತ್ತದೆ. ಅಷ್ಟೇ ಅಲ್ಲ ಈ ರೀತಿ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುತ್ತದೆ. ಇದರಿಂದ ಅದೃಷ್ಟ ಕೂಡಿಬರುತ್ತದೆ. ಹಿರಿಯರ ಆಶೀರ್ವಾದ ಪಡೆದು ಮನೆಯಿಂದ ಹೊರಟರೆ ಎಲ್ಲವೂ ಒಳಿತಾಗುತ್ತದೆ. ನೆಗಟೀವ್ ಎನರ್ಜಿಯಿಂದ ಹೊರಬಂದು ಪಾಸಿಟೀವ್ ಎನರ್ಜಿ ಹೆಚ್ಚಾಗುತ್ತದೆ.  

  2. ನಿಮ್ಮ ಎರಡು ಅಂಗೈಗಳನ್ನು ನೋಡಿಕೊಳ್ಳಿ 

ಬೆಳಗ್ಗೆ ನಿದ್ದೆಯಿಂದ ಎದ್ದ ಕೂಡಲೆ ಅಂಗೈಯನ್ನು ನೋಡಿಕೊಳ್ಳಬೇಕು. ಎರಡೂ ಅಂಗೈಗಳನ್ನು ಹತ್ತಿರಹತ್ತಿರ ಹಿಡಿದು ಆ ಕೆಲಸ ಮಾಡಬೇಕು. ಹಾಗೂ  ಅಂಗೈಗಳನ್ನು ನೋಡಿಕೊಳ್ಳುತ್ತಾ ಈ ಶ್ಲೋಕವನ್ನು ಒಮ್ಮೆ ಪಠಿಸಿ:-

           ಕರಾಗ್ರೆ ವಸತೇ ಲಕ್ಷ್ಮಿ , ಕರಮಧ್ಯೇ ಸರಸ್ವತಿ!                                                                             ಕರಮೂಲೆ ಸ್ಥಿತಾ ಗೌರಿ, ಪ್ರಭಾತೆ ಕರದರ್ಶನಂ!!

ಈ ರೀತಿ  ಮಾಡುವುದರಿಂದ ಕೈ ಬೆರಳುಗಳ ಕೊನೆಯಲ್ಲಿರುವ ಲಕ್ಷ್ಮಿದೇವಿ, ಮಧ್ಯದಲ್ಲಿರುವ ಸರಸ್ವತಿ, ಮಣಿಕಟ್ಟು ಬಳಿ ಇರುವ ಗೌರಿ, ಈ ಮೂವರ ಆಶೀರ್ವಾದ ನಮಗೆ ಸಿಗುತ್ತದೆ. ಇದರಿಂದ ವಿದ್ಯೆ, ಜ್ಞಾನ, ಧನ ಎಲ್ಲವೂ ಕೈಗೂಡತ್ತದೆ.

      3. ಕನ್ನಡಿ

ದಂಪತಿಗಳು ತಮ್ಮತಮ್ಮ ಬೆಡ್ ರೂಮಿನಲ್ಲಿ ಯಾವುದೇ ಕಾರಣಕ್ಕೂ ಕನ್ನಡಿ ಇಟ್ಟುಕೊಳ್ಳಬಾರದು. ಆ ರೀತಿ ಮಾಡುವುದರಿಂದ ಅವರ ವೈವಾಹಿಕ ಜೀವನ ಸುಖಕರವಾಗಿರಲ್ಲ. ಎಲ್ಲವೂ ಸಮಸ್ಯೆಗಳೇ ಬರುತ್ತವಂತೆ. ಆ ರೀತಿ ಕನ್ನಡಿ ಇಟ್ಟುಕೊಂಡು ಬೆಳಗ್ಗೆಯೇ ನೋಡಿದರೆ ಎಲ್ಲವೂ ಅಶುಭ ನಡೆಯುತ್ತದೆ. ಇದು ಕೂಡಿಬರುವುದಿಲ್ಲವಂತೆ.

     4.ಬೆಲ್ಲ

ಬೆಳಗ್ಗೆ ಮನೆಯಿಂದ ಹೊರಗೆ ಹೋಗಬೇಕಾದರೆ ಸ್ವಲ್ಪ ಬೆಲ್ಲ ತಿಂದು ನೀರು ಕುಡಿಯಬೇಕು. ಆ ಬಳಿಕ ಹೊರಗೆ ಹೋಗಬೇಕು. ಈ ರೀತಿಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುವುದಷ್ಟೇ ಅಲ್ಲದೆ, ನಿತ್ಯ ಉತ್ಸಾಹದಿಂದ ಇರುತ್ತೀರ. ಅದರ ಜತೆಗೆ ಪಾಸಿಟೀವ್ ಎನರ್ಜಿ ಜೊತೆಗೆ ಇರುತ್ತದೆ. ಆಗ ಯಾವುದೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ.

    5.ಒತ್ತಡ

ಒತ್ತಡ, ಮಾನಸಿಕ ಸಮಸ್ಯೆಗಳೊಂದಿಗೆ ಒದ್ದಾಡುತ್ತಿರುವವರು ಒಮ್ಮೆ ತಾವು ಮಲಗುತ್ತಿರುವ ಪ್ರದೇಶಕ್ಕೆ ವಿರುದ್ಧವಾಗಿ ಕನ್ನಡಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆ ಕನ್ನಡಿ ಇದ್ದರೆ ಕೂಡಲೆ ಅದನ್ನು ತೆಗೆಯಬೇಕು. ಆ ರೀತಿ ಸಾಧ್ಯವಾಗದಿದ್ದರೆ ಆ ಕನ್ನಡಿಯನ್ನು ವಸ್ತ್ರದಿಂದ ಮುಚ್ಚಬೇಕು. ಇದರಿಂದ ಆಯಾ ಸಮಸ್ಯೆಗಳಿಂದ ಉಪಶಮನ ಸಿಗುತ್ತದೆ. ಈ ರೀತಿ ಇರುವವರು ಕನ್ನಡಿಯನ್ನು ಬೆಳಗ್ಗೆ ಯಾವುದೇ ಕಾರಣಕ್ಕೂ ನೋಡಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…