ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಯಾರೂ ಈ ಚಿತ್ರದ ಸೃಷ್ಟಿಕರ್ತ?
ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯಾರು ಕರಣ್ ಆಚಾರ್ಯ..?
ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.
ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.
ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.
ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.
‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.
ಒಬ್ಬ ಕಲಾವಿದನಾಗಿ ಹನುಮಾನ್ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.
ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.
ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…