ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಯಾರೂ ಈ ಚಿತ್ರದ ಸೃಷ್ಟಿಕರ್ತ?
ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯಾರು ಕರಣ್ ಆಚಾರ್ಯ..?
ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.
ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.
ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.
ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.
‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.
ಒಬ್ಬ ಕಲಾವಿದನಾಗಿ ಹನುಮಾನ್ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.
ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.
ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…