ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಯಾರೂ ಈ ಚಿತ್ರದ ಸೃಷ್ಟಿಕರ್ತ?
ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯಾರು ಕರಣ್ ಆಚಾರ್ಯ..?
ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.
ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.
ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.
ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.
‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.
ಒಬ್ಬ ಕಲಾವಿದನಾಗಿ ಹನುಮಾನ್ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.
ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.
ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…