ಉಪಯುಕ್ತ ಮಾಹಿತಿ

‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

1313

ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ  ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ  ಔತಣಕೂಟದ ಎಲೆಯಲ್ಲಿ ಊಟಕ್ಕೆ  ಉಪ್ಪಿನ ಕಾಯಿ ಇಲ್ಲ ಅಂದ್ರೆ  ಅ ಭೋಜನ ಅಸಂಪೂರ್ಣ  ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-  

ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ  ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-

ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

 

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ.  ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ,  ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು,  ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ.  ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…