ಉಪಯುಕ್ತ ಮಾಹಿತಿ

‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

1315

ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ  ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ  ಔತಣಕೂಟದ ಎಲೆಯಲ್ಲಿ ಊಟಕ್ಕೆ  ಉಪ್ಪಿನ ಕಾಯಿ ಇಲ್ಲ ಅಂದ್ರೆ  ಅ ಭೋಜನ ಅಸಂಪೂರ್ಣ  ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-  

ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ  ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-

ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

 

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ.  ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ,  ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು,  ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ.  ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

    ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಸುದ್ದಿ

    ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

    ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…