News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಉಪಯುಕ್ತ ಮಾಹಿತಿ

‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

1121

ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ  ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ  ಔತಣಕೂಟದ ಎಲೆಯಲ್ಲಿ ಊಟಕ್ಕೆ  ಉಪ್ಪಿನ ಕಾಯಿ ಇಲ್ಲ ಅಂದ್ರೆ  ಅ ಭೋಜನ ಅಸಂಪೂರ್ಣ  ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-  

ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ  ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-

ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

 

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ.  ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ,  ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು,  ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ.  ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸುದ್ದಿ

    ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

    ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ವಿಚಿತ್ರ ಆದರೂ ಸತ್ಯ

    ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ