ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .