ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.
ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.
ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.
ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.