ಜೀವನಶೈಲಿ

ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

948

ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

 

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.

ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.

ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.

ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…