ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.
ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.
ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.
ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ) ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…