ಜೀವನಶೈಲಿ

ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

952

ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

 

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.

ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.

ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.

ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…