News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಶಿಕ್ಷಣ

ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

907

ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ.  ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್‌ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್‌ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .

 

ಪಿಯುಸಿ :- 
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್‌ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.

ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್‌ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್‌ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್‌ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ  ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್‌ಗಳಿಗೆ ಎಂಜಿನಿಯರಿಂಗ್‌ ಕೋರ್ಸ್‌ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್‌, ಮೆಕ್ಯಾನಿಕಲ್‌, ಪ್ಲಂಬಿಂಗ್‌, ಇಲೆಕ್ಟ್ರಿಕಲ್‌ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್‌ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.

ಔದ್ಯೋಗಿಕ ಕೋರ್ಸ್‌ಗಳು :-

ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್‌ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್‌ ಕೋರ್ಸ್‌ಗಳು, ಪ್ಲಂಬಿಂಗ್‌, ಟೈಲರಿಂಗ್‌, ಹೊಟೇಲ್‌ ಮ್ಯಾನೇಜ್‌ಮೆಂಟ್‌, ಟೆಲಿಕಮ್ಯೂನಿಕೇಶನ್‌, ಹೀಗೆ ವಿವಿಧ ಕೋರ್ಸ್‌ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.

ಕಂಪ್ಯೂಟರ್‌ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್‌ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್‌ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್‌ ಕಂಪ್ಯೂಟರ್‌ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್‌ಗಳಿಗೂ ಕಂಪ್ಯೂಟರ್‌ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್‌ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್‌ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್‌ ಸೈನ್ಸ್‌, ಕಂಪ್ಯೂಟರ್‌ ಅಪ್ಲಿಕೇಶನ್‌ ಬಹುಬೇಡಿಕೆಯ ಕೋರ್ಸ್‌ಗಳಾಗಿವೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್‌ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

    ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ…

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.