ಶಿಕ್ಷಣ

ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

891

ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ.  ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್‌ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್‌ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .

 

ಪಿಯುಸಿ :- 
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್‌ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.

ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್‌ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್‌ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್‌ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ  ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್‌ಗಳಿಗೆ ಎಂಜಿನಿಯರಿಂಗ್‌ ಕೋರ್ಸ್‌ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್‌, ಮೆಕ್ಯಾನಿಕಲ್‌, ಪ್ಲಂಬಿಂಗ್‌, ಇಲೆಕ್ಟ್ರಿಕಲ್‌ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್‌ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.

ಔದ್ಯೋಗಿಕ ಕೋರ್ಸ್‌ಗಳು :-

ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್‌ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್‌ ಕೋರ್ಸ್‌ಗಳು, ಪ್ಲಂಬಿಂಗ್‌, ಟೈಲರಿಂಗ್‌, ಹೊಟೇಲ್‌ ಮ್ಯಾನೇಜ್‌ಮೆಂಟ್‌, ಟೆಲಿಕಮ್ಯೂನಿಕೇಶನ್‌, ಹೀಗೆ ವಿವಿಧ ಕೋರ್ಸ್‌ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.

ಕಂಪ್ಯೂಟರ್‌ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್‌ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್‌ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್‌ ಕಂಪ್ಯೂಟರ್‌ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್‌ಗಳಿಗೂ ಕಂಪ್ಯೂಟರ್‌ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್‌ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್‌ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್‌ ಸೈನ್ಸ್‌, ಕಂಪ್ಯೂಟರ್‌ ಅಪ್ಲಿಕೇಶನ್‌ ಬಹುಬೇಡಿಕೆಯ ಕೋರ್ಸ್‌ಗಳಾಗಿವೆ.

ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್‌ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…