ಸ್ಪೂರ್ತಿ

ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

553

ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್‌ಟಿಟಿಎಫ್‌ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್‌ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ  ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.

ಪಿಎಸ್‌ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್‌ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್‌ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.

ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್‌ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್‌ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ರೆಸಿಪಿ

    ಮನೆಯಲ್ಲೇ ಕಾಲ್ ಸೂಪ್ ಮಾಡುವ ಸಿಂಪಲ್ ವಿಧಾನ…

    ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ವಿಚಿತ್ರ ಆದರೂ ಸತ್ಯ

    ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….