ರಾಜಕೀಯ

ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ……

141

ಪರಿಶಿಷ್ಟ  ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ರಾಜ್ಯ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.

ಇದಕ್ಕಾಗಿ, ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣದಲ್ಲಿ 105 ಕೋಟಿ ರೂ. ಮೀಸಲಿಡಲು ಸಭೆಯಲ್ಲಿ  ನಿರ್ಧರಿಸಲಾಯಿತು.

ಈ ಮುನ್ನ  ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್‌ ಪಾಸ್‌ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಶೇ.50 ರಷ್ಟು, ಅಂಬೇಡ್ಕರ್‌ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು.

ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿ ಉಚಿತವಾಗಿ ಬಸ್‌ ಪಾಸ್‌ ನೀಡಬೇಕು. ಎಸ್‌ಸಿಪಿ, ಟಿಎಸ್‌ಪಿ ಹಣದಲ್ಲಿ ವೆಚ್ಚ ಭರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.

ವಿಶೇಷ ಘಟಕ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಗಳನ್ನು ಸಕಾಲದಲ್ಲಿ ಜಾರಿಗೊಳಿಸಿ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.

2015-16 ನೇ ಸಾಲಿನ ಉಳಿಕೆ 751 ಕೋಟಿ ರೂ. ಸೇರಿದಂತೆ ಪ್ರಸಕ್ತ ಸಾಲಿನಲ್ಲಿ 27,703 ಕೋಟಿ ರೂ. ಅನುದಾನ ಲಭ್ಯವಿದೆ. ಅದೇ ರೀತಿ 2016-17 ನೇ ಸಾಲಿನಲ್ಲಿ 1,782 ಕೋಟಿ ರೂ. ವೆಚ್ಚವಾಗಿಲ್ಲ.

ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿರುವ ಎಲ್ಲ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್‌ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಶೇ.100ಕ್ಕೆ 100 ರಷ್ಟು ಸಾಧನೆ ಮಾಡಲೇಬೇಕು ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.

  • ಕವಿ ಪರಿಚಯ

    ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಒಂದು ಕಿರುಪರಿಚಯದ ಬಗ್ಗೆ, ತಿಳಿಯಲು ಈ ಲೇಖನ ಓದಿ..

    ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…