News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಆರೋಗ್ಯ, ಉಪಯುಕ್ತ ಮಾಹಿತಿ

‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1522

ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-

ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.

ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.

ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.

1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.

ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.