ಆರೋಗ್ಯ, ಉಪಯುಕ್ತ ಮಾಹಿತಿ

‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1520

ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-

ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.

ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.

ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.

1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.

ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…