ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.