ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…