ಆರೋಗ್ಯ, ಉಪಯುಕ್ತ ಮಾಹಿತಿ

‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1526

ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-

ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.

ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.

ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.

1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.

ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

    ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ. ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ….

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …