ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…