ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…