News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1527

ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-

ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.

ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.

ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.

1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.

ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ತಂತ್ರಜ್ಞಾನ, ವಿಚಿತ್ರ ಆದರೂ ಸತ್ಯ, ವಿಜ್ಞಾನ, ವಿಸ್ಮಯ ಜಗತ್ತು, ಸುದ್ದಿ

    ಹೆಣ್ಣು ಸಿಗದ ಕಾರಣಕ್ಕೆ ಈ ಭೂಪ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…