ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…