ಸ್ಪೂರ್ತಿ

ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

1874

ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ :-

ಹೌದು, ಶ್ರೀಕಾಂತ್ ಜಿಕ್ಖರ್ರವರು ಭಾರತದ ಅತಿ ಹೆಚ್ಚಿನ ವಿದ್ಯಾರ್ಹತೆಯುಳ್ಳ ವ್ಯಕ್ತಿಯಾಗಿ ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಅನ್ನು ಹೊಂದಿದ್ದಾರೆ. ಎಮ್. ಬಿ. ಬಿ. ಎಸ್  ಮತ್ತು ಎಮ್. ಡಿ. ಇಂದ ಶುರು ಮಾಡಿದ ಇವರು ಎಲ್. ಎಲ್. ಬಿ ಮಾಡಿ ಕಾನೂನನ್ನು ಕೂಡ ಓದಿದ್ದಾರೆ. ನಂತರ ಅಂತಾರಾಷ್ಟ್ರೀಯ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ(ಎಲ್. ಎಲ್. ಎಮ್) ಯನ್ನು ಪಡೆಯುತ್ತಾರೆ. ಹಾಗೂ ಇವರು ಬಿಸ್ನೆಸ್  ಆಡಳಿತ ಮತ್ತು ಪತ್ರಿಕೋದ್ಯಮದಲ್ಲಿಯು ಮಾಸ್ಟರ್ಸ್ ಅನ್ನು ಹೊಂದಿದ್ದಾರೆ .

ಅಷ್ಟೇ ಅಲ್ಲದೆ ಇವರು ಇನ್ನೂ ಬರೋಬ್ಬರಿ ಹತ್ತು ವಿಷಯಾಗಳ್ಲಲ್ಲಿ ಮಾಸ್ಟರ್ಸ್ ಪದವಿ ಯನ್ನು ಹೊಂದಿದ್ದಾರೆ…

ಎಂ. ಎ. ಸಾರ್ವಜನಿಕ ಆಡಳಿತ ,

ಎಂ. ಎ.ಸಮಾಜ ಶಾಸ್ತ್ರ ,

ಎಂ. ಎ. ಅರ್ಥ ಶಾಸ್ತ್ರ ,

ಎಂ. ಎ. ಸಂಸ್ಕೃತ,

ಎಂ. ಎ. ಇತಿಹಾಸ,

ಎಂ. ಎ. ಆಂಗ್ಲ ಸಾಹಿತ್ಯ ,

ಎಂ. ಎ. ತತ್ವ ಶಾಸ್ತ್ರ ,

ಎಂ. ಎ.ರಾಜ್ಯ ಶಾಸ್ತ್ರ ,

ಎಂ. ಎ.ಪ್ರಾಚೀನ ಭಾರತೀಯ ಇತಿಹಾಸ ,

ಸಂಸ್ಕೃತಿ ಮತ್ತು ಪುರಾತನ ಶಾಸ್ತ್ರ ,

ಎಂ. ಎ.ಮನೋವಿಜ್ಞಾನ . ಮತ್ತು ಇವರು ಯಾವುದೇ ಪದವಿಗಿಂತ ಉನ್ನತ ಪದವಿಯಾದ ಡಿ.ಲಿಟ್ (ಡಾಕ್ಟರ್ ಆಫ್ ಲೆಟರ್ಸ್) ಅನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಸಾಕಷ್ಟು ಪದವಿಗಳಲ್ಲಿ ಚಿನ್ನದ ಪದಕಗಳನ್ನು ಗಳಿಸಿದ ಇವರು ಹಲವಾರು ಪದವಿಗಳಲ್ಲಿ ಪ್ರಥಮ ಶ್ರೇಣಿ /ಪ್ರಥಮ ದರ್ಜೆಯನ್ನು ಗಳಿಸಿದ ಹೆಮ್ಮೆ ಇವರದಾಗಿದೆ.

ಐಎಎಸ್ ಮತ್ತು ಐಪಿಎಸ್ :-

1978 ರಲ್ಲಿ ಅವರು ಇಂಡಿಯನ್ ಸಿವಿಲ್ ಸರ್ವಿಸ್ ಪರೀಕ್ಷೆ (IPS)ಯನ್ನು ಬರೆದು,ಇಂಡಿಯನ್ ಸಿವಿಲ್ ಸರ್ವಿಸ್ (ಐಪಿಎಸ್) ನಲ್ಲಿ ಆಯ್ಕೆಯಾದರು. ನಂತರ ಐಪಿಎಸ್ ಹುದ್ದೆಗೆ ರಾಜಿನಾಮೆ ನೀಡಿ,ಮತ್ತೆ 1980ರಲ್ಲಿ ಭಾರತೀಯ ಸಿವಿಲ್ ಸರ್ವೀಸ್ ಪರೀಕ್ಷೆ (IAS) ಪರೀಕ್ಷೆಯನ್ನು ಬರೆದ್ರು.ಅದರಲ್ಲೂ ಕೂಡ  ಐಎಎಸ್ ಆಫಿಸರ್ ಆಗಿ ಆಯ್ಕೆ ಆದ್ರು.ಆದರೆ ನಾಲ್ಕು ತಿಂಗಳ ನಂತರ ತಮ್ಮ ಐಎಎಸ್ ಹುದ್ದೆಗೂ ರಾಜೀನಾಮೆ ನೀಡಿದ್ರು.

ಕಿರಿಯ ವಯಸ್ಸಿನ ಎಂಎಲ್ಎ :-

1980ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ,ತಮ್ಮ ಮೊದಲ ಸಾರ್ವತ್ರಿಕ ಚುನಾವಣೆಯಲ್ಲೇ ಗೆದ್ದು, ತಮ್ಮ 26ನೇ ವಯಸ್ಸಿನಲ್ಲೇ,ಎಂಎಲ್ಎ ಆಗಿ  ಆಯ್ಕೆ ಆದ್ರು.ಹಾಗೂ ಭಾರತದಲ್ಲೇ ಅತೀ ಕಿರಿಯ ವಯಸ್ಸಿನ ಎಂಎಲ್ಎ ಎಂಬ ಹೆಸರಿಗೆ ಪಾತ್ರರಾದ್ರು ಕೂಡ. ತರುವಾಯ ಆ ಸಮಯದಲ್ಲಿ  14 ಶಾಸಕಾಂಗಗಳನ್ನು ಹೊಂದಿರುವ ಸರ್ಕಾರದ, ಅತ್ಯಂತ ಶಕ್ತಿಶಾಲಿ ಸರ್ಕಾರಿ ಮಂತ್ರಿಯಾದರು.

ಭಾರತದಲ್ಲಿ 52,000 ಕ್ಕಿಂತ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯಗಳಲ್ಲಿ ಇವರದು ಒಂದು ವೈಯುಕ್ತಿಕ ಗ್ರಂಥಾಲಯ ಸೇರಿದೆ.ಶ್ರೀಕಾಂತ್ ಜಿಕ್ಖರ್ರವರು ಒಬ್ಬ ಶಿಕ್ಷಣತಜ್ಞ, ವರ್ಣಚಿತ್ರಕಾರ, ವೃತ್ತಿಪರ ಛಾಯಾಗ್ರಾಹಕ, ಮತ್ತು ನಟರು ಕೂಡ ಆಗಿದ್ದರುಇವರು 1992-98ರವರೆಗೆ ಭಾರತ ರಾಜ್ಯಾಂಗದ ಸದಸ್ಯರಾಗಿದ್ದರು. ಅವರು 1992 ರಲ್ಲಿ ನಾಗಪುರದಲ್ಲಿ ಸಂದಿಪಾನಿ ಎಂಬ ಶಾಲೆ ಸ್ಥಾಪಿಸಿದರು.ದುರದೃಷ್ಟಕರ ಎಂದರೆ ತಮ್ಮ 49ನೇ ವಯಸ್ಸಿನಲ್ಲಿ ಕಾರ್ ಅಪಘಾತವೊಂದರಲ್ಲಿ ತೀರಿಕೊಂಡ್ರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…