ಸ್ಪೂರ್ತಿ

ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

1861

ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ :-

ಹೌದು, ಶ್ರೀಕಾಂತ್ ಜಿಕ್ಖರ್ರವರು ಭಾರತದ ಅತಿ ಹೆಚ್ಚಿನ ವಿದ್ಯಾರ್ಹತೆಯುಳ್ಳ ವ್ಯಕ್ತಿಯಾಗಿ ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಅನ್ನು ಹೊಂದಿದ್ದಾರೆ. ಎಮ್. ಬಿ. ಬಿ. ಎಸ್  ಮತ್ತು ಎಮ್. ಡಿ. ಇಂದ ಶುರು ಮಾಡಿದ ಇವರು ಎಲ್. ಎಲ್. ಬಿ ಮಾಡಿ ಕಾನೂನನ್ನು ಕೂಡ ಓದಿದ್ದಾರೆ. ನಂತರ ಅಂತಾರಾಷ್ಟ್ರೀಯ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ(ಎಲ್. ಎಲ್. ಎಮ್) ಯನ್ನು ಪಡೆಯುತ್ತಾರೆ. ಹಾಗೂ ಇವರು ಬಿಸ್ನೆಸ್  ಆಡಳಿತ ಮತ್ತು ಪತ್ರಿಕೋದ್ಯಮದಲ್ಲಿಯು ಮಾಸ್ಟರ್ಸ್ ಅನ್ನು ಹೊಂದಿದ್ದಾರೆ .

ಅಷ್ಟೇ ಅಲ್ಲದೆ ಇವರು ಇನ್ನೂ ಬರೋಬ್ಬರಿ ಹತ್ತು ವಿಷಯಾಗಳ್ಲಲ್ಲಿ ಮಾಸ್ಟರ್ಸ್ ಪದವಿ ಯನ್ನು ಹೊಂದಿದ್ದಾರೆ…

ಎಂ. ಎ. ಸಾರ್ವಜನಿಕ ಆಡಳಿತ ,

ಎಂ. ಎ.ಸಮಾಜ ಶಾಸ್ತ್ರ ,

ಎಂ. ಎ. ಅರ್ಥ ಶಾಸ್ತ್ರ ,

ಎಂ. ಎ. ಸಂಸ್ಕೃತ,

ಎಂ. ಎ. ಇತಿಹಾಸ,

ಎಂ. ಎ. ಆಂಗ್ಲ ಸಾಹಿತ್ಯ ,

ಎಂ. ಎ. ತತ್ವ ಶಾಸ್ತ್ರ ,

ಎಂ. ಎ.ರಾಜ್ಯ ಶಾಸ್ತ್ರ ,

ಎಂ. ಎ.ಪ್ರಾಚೀನ ಭಾರತೀಯ ಇತಿಹಾಸ ,

ಸಂಸ್ಕೃತಿ ಮತ್ತು ಪುರಾತನ ಶಾಸ್ತ್ರ ,

ಎಂ. ಎ.ಮನೋವಿಜ್ಞಾನ . ಮತ್ತು ಇವರು ಯಾವುದೇ ಪದವಿಗಿಂತ ಉನ್ನತ ಪದವಿಯಾದ ಡಿ.ಲಿಟ್ (ಡಾಕ್ಟರ್ ಆಫ್ ಲೆಟರ್ಸ್) ಅನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಸಾಕಷ್ಟು ಪದವಿಗಳಲ್ಲಿ ಚಿನ್ನದ ಪದಕಗಳನ್ನು ಗಳಿಸಿದ ಇವರು ಹಲವಾರು ಪದವಿಗಳಲ್ಲಿ ಪ್ರಥಮ ಶ್ರೇಣಿ /ಪ್ರಥಮ ದರ್ಜೆಯನ್ನು ಗಳಿಸಿದ ಹೆಮ್ಮೆ ಇವರದಾಗಿದೆ.

ಐಎಎಸ್ ಮತ್ತು ಐಪಿಎಸ್ :-

1978 ರಲ್ಲಿ ಅವರು ಇಂಡಿಯನ್ ಸಿವಿಲ್ ಸರ್ವಿಸ್ ಪರೀಕ್ಷೆ (IPS)ಯನ್ನು ಬರೆದು,ಇಂಡಿಯನ್ ಸಿವಿಲ್ ಸರ್ವಿಸ್ (ಐಪಿಎಸ್) ನಲ್ಲಿ ಆಯ್ಕೆಯಾದರು. ನಂತರ ಐಪಿಎಸ್ ಹುದ್ದೆಗೆ ರಾಜಿನಾಮೆ ನೀಡಿ,ಮತ್ತೆ 1980ರಲ್ಲಿ ಭಾರತೀಯ ಸಿವಿಲ್ ಸರ್ವೀಸ್ ಪರೀಕ್ಷೆ (IAS) ಪರೀಕ್ಷೆಯನ್ನು ಬರೆದ್ರು.ಅದರಲ್ಲೂ ಕೂಡ  ಐಎಎಸ್ ಆಫಿಸರ್ ಆಗಿ ಆಯ್ಕೆ ಆದ್ರು.ಆದರೆ ನಾಲ್ಕು ತಿಂಗಳ ನಂತರ ತಮ್ಮ ಐಎಎಸ್ ಹುದ್ದೆಗೂ ರಾಜೀನಾಮೆ ನೀಡಿದ್ರು.

ಕಿರಿಯ ವಯಸ್ಸಿನ ಎಂಎಲ್ಎ :-

1980ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ,ತಮ್ಮ ಮೊದಲ ಸಾರ್ವತ್ರಿಕ ಚುನಾವಣೆಯಲ್ಲೇ ಗೆದ್ದು, ತಮ್ಮ 26ನೇ ವಯಸ್ಸಿನಲ್ಲೇ,ಎಂಎಲ್ಎ ಆಗಿ  ಆಯ್ಕೆ ಆದ್ರು.ಹಾಗೂ ಭಾರತದಲ್ಲೇ ಅತೀ ಕಿರಿಯ ವಯಸ್ಸಿನ ಎಂಎಲ್ಎ ಎಂಬ ಹೆಸರಿಗೆ ಪಾತ್ರರಾದ್ರು ಕೂಡ. ತರುವಾಯ ಆ ಸಮಯದಲ್ಲಿ  14 ಶಾಸಕಾಂಗಗಳನ್ನು ಹೊಂದಿರುವ ಸರ್ಕಾರದ, ಅತ್ಯಂತ ಶಕ್ತಿಶಾಲಿ ಸರ್ಕಾರಿ ಮಂತ್ರಿಯಾದರು.

ಭಾರತದಲ್ಲಿ 52,000 ಕ್ಕಿಂತ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯಗಳಲ್ಲಿ ಇವರದು ಒಂದು ವೈಯುಕ್ತಿಕ ಗ್ರಂಥಾಲಯ ಸೇರಿದೆ.ಶ್ರೀಕಾಂತ್ ಜಿಕ್ಖರ್ರವರು ಒಬ್ಬ ಶಿಕ್ಷಣತಜ್ಞ, ವರ್ಣಚಿತ್ರಕಾರ, ವೃತ್ತಿಪರ ಛಾಯಾಗ್ರಾಹಕ, ಮತ್ತು ನಟರು ಕೂಡ ಆಗಿದ್ದರುಇವರು 1992-98ರವರೆಗೆ ಭಾರತ ರಾಜ್ಯಾಂಗದ ಸದಸ್ಯರಾಗಿದ್ದರು. ಅವರು 1992 ರಲ್ಲಿ ನಾಗಪುರದಲ್ಲಿ ಸಂದಿಪಾನಿ ಎಂಬ ಶಾಲೆ ಸ್ಥಾಪಿಸಿದರು.ದುರದೃಷ್ಟಕರ ಎಂದರೆ ತಮ್ಮ 49ನೇ ವಯಸ್ಸಿನಲ್ಲಿ ಕಾರ್ ಅಪಘಾತವೊಂದರಲ್ಲಿ ತೀರಿಕೊಂಡ್ರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ವ್ಯಕ್ತಿ ವಿಶೇಷಣ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…