ಸೌಂದರ್ಯ

ಕಣ್ಣಿನ ಕಪ್ಪು ವರ್ತುಲಗಳಿಂದ ಕಿರಿಕಿರಿ ಆಗುತ್ತಿದೆಯೇ?ಹಾಗಾದ್ರೆ ಈ ಲೇಖನಿ ಓದಿ…

1008

ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.

ಕಣ್ಣಿನ ಸುತ್ತ ಉಂಟಾಗುವ ಕಪ್ಪು ವರ್ತುಲಗಳು ಮುಖದ ಸೌಂದರ್ಯ ಹಾಳು ಮಾಡುತ್ತವೆ ಹಾಗೂ ಕಿರಿ ಕಿರಿ ಕೂಡ. ಮೇಕಪ್‌ನಿಂದ ಇವುಗಳನ್ನು ಮುಚ್ಚಿದರೆ ಅದು ತಾತ್ಕಾಲಿಕ ಉಪಶಮನವಷ್ಟೇ ಆಗಬಲ್ಲದು. ‘ಕಪ್ಪು ವರ್ತುಲಗಳಿಂದ ಶಾಶ್ವತ ಮುಕ್ತಿ ಪಡೆಯಲು ಸಾಧ್ಯವಿಲ್ಲವೇ ಅಂತ ನಿಮ್ಗೆ ಅನ್ನಿಸಬಹುದು.

ಇದಕ್ಕೆ ಮುಖ್ಯ ಕಾರಣಗಳು:-
ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು.

ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ತಂದುಕೊಳ್ಳುವುದು ಬಹಳ ಮುಖ್ಯ.

ಕಪ್ಪು ವರ್ತುಲಗಳು ಗಂಭೀರ ಸಮಸ್ಯೆಯಲ್ಲ. ಮನೆಯಲ್ಲೇ ಗೃಹೌಷಧಿಗಳಿಂದ ಕಪ್ಪು ವರ್ತುಲಗಳನ್ನು ನಿವಾರಣೆ ಮಾಡಿ ಮೊಗದ ಸೌಂದರ್ಯ ಮತ್ತು ಆರೋಗ್ಯವನ್ನು ವರ್ಧಿಸಬಹುದು.

  • ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.
  • ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.
  • ಆಯಾ ಕಾಲದಲ್ಲಿ ಸಿಗುವ ಹಣ್ಣುಗಳನ್ನು ಸೇವಿಸಿ.
  • ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.
  • ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.
  • ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.
  • ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.

  • ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.
  • ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…

  • ಸ್ಪೂರ್ತಿ

    ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.