ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…