ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…