News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ವ್ಯಕ್ತಿ ವಿಶೇಷಣ

ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

157

ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-

 ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘ‌ವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್‌ವೈಟರ್‌ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.

ಹೈಕೋರ್ಟ್‌ನಲ್ಲೂ ಬರಲಿ:-

ಜೆಎಂಎಫ್‌ಸಿ ಮತ್ತು ಜಿಲ್ಲಾ ಕೋರ್ಟ್‌ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್‌ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್‌ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್‌ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್‌ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್‌-ಮ್ಯಾಜಿಸ್ಟ್ರೇಟ್‌ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್‌, ಕಂದಾಯ, ಸಿವಿಲ್‌, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ  ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ. 
 ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

    ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…

  • ದೇವರು-ಧರ್ಮ

    ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

    ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ವಿಚಿತ್ರ ಆದರೂ ಸತ್ಯ

    ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….