News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವ್ಯಕ್ತಿ ವಿಶೇಷಣ

ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

162

ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-

 ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘ‌ವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್‌ವೈಟರ್‌ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.

ಹೈಕೋರ್ಟ್‌ನಲ್ಲೂ ಬರಲಿ:-

ಜೆಎಂಎಫ್‌ಸಿ ಮತ್ತು ಜಿಲ್ಲಾ ಕೋರ್ಟ್‌ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್‌ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್‌ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್‌ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್‌ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್‌-ಮ್ಯಾಜಿಸ್ಟ್ರೇಟ್‌ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್‌, ಕಂದಾಯ, ಸಿವಿಲ್‌, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ  ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ. 
 ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಉಪಯುಕ್ತ ಮಾಹಿತಿ

    ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ರೀಚಾರ್ಜ್ ಮಾಡಿಸಿದರೆ..ರೂ.3,300 ಕ್ಯಾಷ್ ಬ್ಯಾಕ್..!ತಿಳಿಯಲು ಈ ಲೇಖನ ಓದಿ..

    ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.