News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವ್ಯಕ್ತಿ ವಿಶೇಷಣ

ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

161

ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-

 ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘ‌ವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್‌ವೈಟರ್‌ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.

ಹೈಕೋರ್ಟ್‌ನಲ್ಲೂ ಬರಲಿ:-

ಜೆಎಂಎಫ್‌ಸಿ ಮತ್ತು ಜಿಲ್ಲಾ ಕೋರ್ಟ್‌ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್‌ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್‌ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್‌ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್‌ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್‌-ಮ್ಯಾಜಿಸ್ಟ್ರೇಟ್‌ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್‌, ಕಂದಾಯ, ಸಿವಿಲ್‌, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ  ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ. 
 ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…