News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ

ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

159

ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-

 ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘ‌ವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್‌ವೈಟರ್‌ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.

ಹೈಕೋರ್ಟ್‌ನಲ್ಲೂ ಬರಲಿ:-

ಜೆಎಂಎಫ್‌ಸಿ ಮತ್ತು ಜಿಲ್ಲಾ ಕೋರ್ಟ್‌ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್‌ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್‌ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್‌ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್‌ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್‌-ಮ್ಯಾಜಿಸ್ಟ್ರೇಟ್‌ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್‌, ಕಂದಾಯ, ಸಿವಿಲ್‌, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ  ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ. 
 ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…