News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ

ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

157

ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-

 ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘ‌ವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್‌ವೈಟರ್‌ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.

ಹೈಕೋರ್ಟ್‌ನಲ್ಲೂ ಬರಲಿ:-

ಜೆಎಂಎಫ್‌ಸಿ ಮತ್ತು ಜಿಲ್ಲಾ ಕೋರ್ಟ್‌ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್‌ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್‌ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್‌ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್‌ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್‌-ಮ್ಯಾಜಿಸ್ಟ್ರೇಟ್‌ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್‌, ಕಂದಾಯ, ಸಿವಿಲ್‌, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ  ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ. 
 ನ್ಯಾ.ಎಸ್‌.ಎಚ್‌. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ….!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…