ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್ವೈಟರ್ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್ನಲ್ಲೂ ಬರಲಿ:-
ಜೆಎಂಎಫ್ಸಿ ಮತ್ತು ಜಿಲ್ಲಾ ಕೋರ್ಟ್ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ.
ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…