ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.
೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.
ತೂಕ ಇಳಿಸಲು ನೆರವಾಗುತ್ತದೆ:-
ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.
ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.
ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.
ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….