ಆರೋಗ್ಯ

ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

1352

ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ  ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.

ಕರಬೂಜ ಹಣ್ಣು ಹಾಗೂ ಬೀಜ ಇವು ಕರಬೂಜದ ಔಷಧೋಪಯೋಗಿ ಭಾಗಗಳು:-

೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.

ತೂಕ ಇಳಿಸಲು ನೆರವಾಗುತ್ತದೆ:-

ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.

ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್‍ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.

ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.

ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

    ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಉಪಯುಕ್ತ ಮಾಹಿತಿ

    ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

    ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.