inspirational

ಕರೋನಾ ವೈರಸ್ COVID – 19

17
  • MAYOON N/ BIOTECHNOLOGIST / KOLAR
COVID -19

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.​

ಕೊರೊನಾ ವೈರಸ್ ಸೋಂಕು ಎಂದರೇನು?

COVID VIRUS

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.

ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

Covid virus @ lung’s

​ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

*ಅಪರೂಪದಲ್ಲಿ ಮಲದ ಮೂಲಕ

CORONA DISEASE

​ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?

ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

SYMPTOMS

​ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?

ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.

*ಮೂಗು ಸೋರುವುದು

*ತಲೆನೋವು

*ಕೆಮ್ಮು

*ಗಂಟು ನೋವು

*ಜ್ವರ

*ಸಂಪೂರ್ಣವಾಗಿ ಅನಾರೋಗ್ಯ

ಈ ರೋಗದ ವೈರಸ್‌ಗಳು ತುಂಬಾನೇ ಡೇಂಜರಸ್

ಕೆಲವು ಕೊರೊನಾ ವೈರಸ್‌ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.

ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.

*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.

​ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?

COVID VIRUS
  • ಕೊರೊನಾ ವೈರಸ್ ಪತ್ತೆ ಮಾಡಲು ವೈದ್ಯರು
  • ವೈದ್ಯಕೀಯ ಇತಿಹಾಸ ತಿಳಿಯುವರು
  • ದೈಹಿಕ ಪರೀಕ್ಷೆ ಮಾಡುವರು
  • ರಕ್ತ ಪರೀಕ್ಷೆ ಮಾಡಬಹುದು.
  • ಕಫ, ಗಂಟಲಿನ ಸ್ವಾಬ್ ನ ಮಾದರಿ ಮತ್ತು ಇತರ ಉಸಿರಾಟದ ಪರೀಕ್ಷೆ ಮಾಡಿಸಬಹುದು.

​ಕೊರೊನಾ ವೈರಸ್ ಗೆ ಚಿಕಿತ್ಸೆಗಳು ಯಾವುದು?

ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.

*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.

*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.

*ಸಾಕಷ್ಟು ವಿಶ್ರಾಂತಿ ಪಡೆಯಿರಿ.

ನೀರಿನಾಂಶ ಹೆಚ್ಚು ಸೇವಿಸಿ.

​ಕೊರೊನಾ ವೈರಸ್ ತಡೆಯಬಹುದೇ?

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.

*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.

* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.

*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.

*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.

*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.

*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.

ವಿಳಾಸ: MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸುದ್ದಿ

    ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

    ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…