inspirational

ಕರೋನಾ ವೈರಸ್ COVID – 19

17
  • MAYOON N/ BIOTECHNOLOGIST / KOLAR
COVID -19

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.​

ಕೊರೊನಾ ವೈರಸ್ ಸೋಂಕು ಎಂದರೇನು?

COVID VIRUS

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.

ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

Covid virus @ lung’s

​ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

*ಅಪರೂಪದಲ್ಲಿ ಮಲದ ಮೂಲಕ

CORONA DISEASE

​ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?

ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

SYMPTOMS

​ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?

ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.

*ಮೂಗು ಸೋರುವುದು

*ತಲೆನೋವು

*ಕೆಮ್ಮು

*ಗಂಟು ನೋವು

*ಜ್ವರ

*ಸಂಪೂರ್ಣವಾಗಿ ಅನಾರೋಗ್ಯ

ಈ ರೋಗದ ವೈರಸ್‌ಗಳು ತುಂಬಾನೇ ಡೇಂಜರಸ್

ಕೆಲವು ಕೊರೊನಾ ವೈರಸ್‌ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.

ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.

*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.

​ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?

COVID VIRUS
  • ಕೊರೊನಾ ವೈರಸ್ ಪತ್ತೆ ಮಾಡಲು ವೈದ್ಯರು
  • ವೈದ್ಯಕೀಯ ಇತಿಹಾಸ ತಿಳಿಯುವರು
  • ದೈಹಿಕ ಪರೀಕ್ಷೆ ಮಾಡುವರು
  • ರಕ್ತ ಪರೀಕ್ಷೆ ಮಾಡಬಹುದು.
  • ಕಫ, ಗಂಟಲಿನ ಸ್ವಾಬ್ ನ ಮಾದರಿ ಮತ್ತು ಇತರ ಉಸಿರಾಟದ ಪರೀಕ್ಷೆ ಮಾಡಿಸಬಹುದು.

​ಕೊರೊನಾ ವೈರಸ್ ಗೆ ಚಿಕಿತ್ಸೆಗಳು ಯಾವುದು?

ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.

*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.

*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.

*ಸಾಕಷ್ಟು ವಿಶ್ರಾಂತಿ ಪಡೆಯಿರಿ.

ನೀರಿನಾಂಶ ಹೆಚ್ಚು ಸೇವಿಸಿ.

​ಕೊರೊನಾ ವೈರಸ್ ತಡೆಯಬಹುದೇ?

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.

*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.

* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.

*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.

*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.

*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.

*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.

ವಿಳಾಸ: MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…