inspirational

ಕರೋನಾ ವೈರಸ್ COVID – 19

21
  • MAYOON N/ BIOTECHNOLOGIST / KOLAR
COVID -19

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.​

ಕೊರೊನಾ ವೈರಸ್ ಸೋಂಕು ಎಂದರೇನು?

COVID VIRUS

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.

ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

Covid virus @ lung’s

​ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

*ಅಪರೂಪದಲ್ಲಿ ಮಲದ ಮೂಲಕ

CORONA DISEASE

​ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?

ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

SYMPTOMS

​ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?

ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.

*ಮೂಗು ಸೋರುವುದು

*ತಲೆನೋವು

*ಕೆಮ್ಮು

*ಗಂಟು ನೋವು

*ಜ್ವರ

*ಸಂಪೂರ್ಣವಾಗಿ ಅನಾರೋಗ್ಯ

ಈ ರೋಗದ ವೈರಸ್‌ಗಳು ತುಂಬಾನೇ ಡೇಂಜರಸ್

ಕೆಲವು ಕೊರೊನಾ ವೈರಸ್‌ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.

ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.

*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.

​ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?

COVID VIRUS
  • ಕೊರೊನಾ ವೈರಸ್ ಪತ್ತೆ ಮಾಡಲು ವೈದ್ಯರು
  • ವೈದ್ಯಕೀಯ ಇತಿಹಾಸ ತಿಳಿಯುವರು
  • ದೈಹಿಕ ಪರೀಕ್ಷೆ ಮಾಡುವರು
  • ರಕ್ತ ಪರೀಕ್ಷೆ ಮಾಡಬಹುದು.
  • ಕಫ, ಗಂಟಲಿನ ಸ್ವಾಬ್ ನ ಮಾದರಿ ಮತ್ತು ಇತರ ಉಸಿರಾಟದ ಪರೀಕ್ಷೆ ಮಾಡಿಸಬಹುದು.

​ಕೊರೊನಾ ವೈರಸ್ ಗೆ ಚಿಕಿತ್ಸೆಗಳು ಯಾವುದು?

ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.

*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.

*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.

*ಸಾಕಷ್ಟು ವಿಶ್ರಾಂತಿ ಪಡೆಯಿರಿ.

ನೀರಿನಾಂಶ ಹೆಚ್ಚು ಸೇವಿಸಿ.

​ಕೊರೊನಾ ವೈರಸ್ ತಡೆಯಬಹುದೇ?

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.

*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.

* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.

*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.

*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.

*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.

*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.

ವಿಳಾಸ: MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • ದೇಶ-ವಿದೇಶ

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…