News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
karnataka

ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

1239

ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

ಉದಯ ನ್ಯೂಸ್ ಸಿಬ್ಬಂದಿಗಳಿಗೆ ಸಂಚಕಾರ..!

ಕಳೆದ ಐದು ವರ್ಷಗಳಲ್ಲಿ 3,834.95 ಕೋಟಿ ನಿವ್ವಳ ಲಾಭ ಗಳಿಸಿದ ಸನ್ ನೆಟ್ವರ್ಕ್ ತನ್ನ ಅಂಗ ಸಂಸ್ಥೆ ‘ಉದಯ ನ್ಯೂಸ್’ನ್ನು ಮುಚ್ಚಲು ತೀರ್ಮಾನಿಸಿದೆ. ನಷ್ಟದ ಕಾರಣವನ್ನು ಮುಂದಿಟ್ಟ ಸಂಸ್ಥೆಯ ಮಾಲೀಕ ಕಲಾನಿಧಿ ಮಾರನ್ 73 ಸಿಬ್ಬಂದಿಗಳ ಉದ್ಯೋಗ ಖಾತ್ರಿಯನ್ನು ಕಿತ್ತುಕೊಳ್ಳಲು ಮೂರು ತಿಂಗಳ ಕಾಲಾವಕಾಶ ನಿಗದಿ ಮಾಡಿದ್ದಾರೆ. ಕಾರ್ಪೊರೇಟ್ ಭ್ರಮೆಯಲ್ಲಿ ಮಿಂದೇಳುತ್ತಿರುವ ದೇಶದಲ್ಲಿ, ಬೃಹತ್ ಕಾರ್ಪೊರೇಟ್ ಮಾಧ್ಯಮ ಸಂಸ್ಥೆಯೊಂದು ಹೇಗೆ ತನ್ನ ಸಿಬ್ಬಂದಿಗಳನ್ನು ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ.

ಕರ್ನಾಟಕದ ಮೊದಲ ಖಾಸಗಿ ಚಾನೆಲ್…

ಕರ್ನಾಟಕದ ಖಾಸಗಿ ಟಿವಿ ವಲಯಕ್ಕೆ ಮೊದಲು ಕಾಲಿಟ್ಟಿದ್ದು ಉದಯ ಟಿವಿ. ಸುಮಾರು 19 ವರ್ಷಗಳ ಹಿಂದೆ ರಾಜ್ಯದಲ್ಲಿ ಡಿಡಿ 1 ಹಾಗೂ ಚಂದನ ವಾಹಿನಿಗಳು ನೀಡುತ್ತಿದ್ದ ಮನೋರಂಜನೆಯನ್ನು ಸ್ಥಿತ್ಯಂತರಗೊಳಿಸಿದ್ದು ತಮಿಳುನಾಡು ಮೂಲದ ‘ಸನ್ ನೆಟ್ವರ್ಕ್’ ಮಾಧ್ಯಮ ಸಂಸ್ಥೆ. ಉದಯ ಟಿವಿ ಹೆಸರಿನಲ್ಲಿ ಅದು ಮೊದಲು ತನ್ನ ಕಾರ್ಯಾಚರಣೆ ಶುರು ಮಾಡುತ್ತಿದ್ದಂತೆ ಜನ ಕೂಡ ಹೊಸ ಮಾದರಿಯ ಮನೋರಂಜನೆಗೆ ಒಗ್ಗಿಕೊಂಡರು. ಅಲ್ಲಿಂದ ಸುಮಾರು ಒಂದೂವರೆ ದಶಕಗಳ ಕಾಲ ಕರ್ನಾಟಕದ ಮನೋರಂಜನಾ ಲೋಕದ ಅನಭಿಷಕ್ತ ದೊರೆಯಾಗಿ ಉದಯ ಟಿವಿ ಆಳ್ವಿಕೆ ನಡೆಸಿತು.

ಹೀಗಿರುವಾಗಲೇ, 2000ನೇ ಇಸವಿಯಲ್ಲಿ ನಟ ರಾಜ್ ಕುಮಾರ್ ಅಪಹರಣ ಪ್ರಕರಣ ನಡೆಯಿತು. ತನ್ನ ಬಳಿ ಇದ್ದ ಸುದ್ದಿ ವಾಹಿನಿಯ ಪರವಾನಗಿಯನ್ನು ಅನುಷ್ಠಾನಕ್ಕೆ ಇಳಿಸಲು ‘ಸನ್ ನೆಟ್ವರ್ಕ್’ ಮುಂದಾಯಿತು. ಹಾಗೆ ತರಾತುರಿಯಲ್ಲಿ ಆರಂಭಗೊಂಡಿದ್ದು ‘ಉದಯ ನ್ಯೂಸ್’. “ಅವತ್ತು ಹೆಚ್ಚಿನ ಸಿದ್ದತೆಗಳೂ ಇರಲಿಲ್ಲ.

ಉದಯ ಮನೋರಂಜನಾ ವಾಹಿನಿಯಲ್ಲಿದ್ದ ಸಿಬ್ಬಂದಿಗಳನ್ನೇ ಹೊಸ ನ್ಯೂಸ್ ಚಾನಲ್ಗೆ ವರ್ಗಾವಣೆ ಮಾಡಲಾಯಿತು. ತಾಂತ್ರಿಕ ಉಪಕರಣಗಳನ್ನು ಎರವಲು ಪಡೆಯಲಾಯಿತು. ಮೊನ್ನೆ ಮೊನ್ನೆವರೆಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಮಾಡಲು ಒದ್ದಾಡುತ್ತಿದ್ದೆವು. ಈಗಿರುವುದು 3 ವಿಡಿಯೋ ಎಡಿಟರ್ಗಳು, ಡೆಸ್ಕ್ನಲ್ಲಿ ಐವರು ಸಿಬ್ಬಂದಿ. ಕಳಪೆ ಮಟ್ಟದ ಸೌಕರ್ಯ ನೀಡಿ ರೇಟಿಂಗ್ ತನ್ನಿ ಎಂದರೆ ಹೇಗೆ ಸಾಧ್ಯ?” ಎನ್ನುತ್ತಾರೆ ಉದಯ ನ್ಯೂಸ್ ಹಿರಿಯ ಸಿಬ್ಬಂದಿಯೊಬ್ಬರು.

ಇವತ್ತಿಗೂ ಕಡಿಮೆ ಖರ್ಚಿನಲ್ಲಿ ನಡೆಯುತ್ತಿರುವ ಸುದ್ದಿವಾಹಿನಿ…

ಇವತ್ತಿಗೆ ಡಜನ್ ಸಂಖ್ಯೆ ಮುಟ್ಟಿರುವ ಕನ್ನಡದ ಸುದ್ದಿ ವಾಹಿನಿಗಳ ಪೈಕಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಕಾರ್ಯಚರಣೆ ನಡೆಸುತ್ತಿರುವುದು ‘ಉದಯ ನ್ಯೂಸ್’. ಇಲ್ಲಿನ ಆಂತರಿಕ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, “ಪ್ರತಿ ತಿಂಗಳು ಸುದ್ದಿ ವಾಹಿನಿಗೆ ಖರ್ಚಾಗುತ್ತಿರುವುದು 25 ಲಕ್ಷ ರೂಪಾಯಿಗಳು. ಇದರಲ್ಲಿ ಸಂಸ್ಥೆಯಲ್ಲಿರುವ 73 ಸಿಬ್ಬಂದಿಗಳಿಗೆ ಸಂಬಳ ರೂಪದಲ್ಲಿ ವೆಚ್ಚ ಮಾಡುತ್ತಿದ್ದದ್ದು 13 ಲಕ್ಷ. ಜತೆಗೆ ಇದಕ್ಕೆ ಪ್ರತ್ಯೇಕವಾದ ಮಾರ್ಕೆಟಿಂಗ್ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ.”

ಚಾನಲ್ ಮುಚ್ಚುವ ಬಗ್ಗೆ ಸಂಸ್ಥೆ ಲೇಬರ್ ಕಮಿಷನರ್ ಗೆ ಬರೆದ ಪತ್ರ:-

ಕಳೆದ ನಾಲ್ಕು ವರ್ಷಗಳಿಂದ ‘ಉದಯ ನ್ಯೂಸ್’ ಮುಚ್ಚಲಾಗುತ್ತಂತೆ ಅನ್ನುವ ವರ್ತಮಾನ ಇಲ್ಲಿನ ಸಿಬ್ಬಂದಿಗಳಿಗೆ ಸಾಮಾನ್ಯ ಸಂಗತಿಯಾಗಿ ಬದಲಾಗಿತ್ತು. ಮೊದಲು ಬಾಯ್ಮಾತಿನಲ್ಲಿ, ಗಾಳಿ ಸುದ್ದಿ ರೂಪದಲ್ಲಿದ್ದ ಈ ಸುದ್ದಿ ಇತ್ತೀಚೆಗೆ ‘ಸನ್ ನೆಟ್ವರ್ಕ್’ ಕಡೆಯಿಂದ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮತ್ತು ಕಾರ್ಮಿಕ ಸಚಿವಾಲಯಕ್ಕೆ ಸಲ್ಲಿಸಿದ ‘ಫಾರ್ಮ್ ಕ್ಯೂ’ ರೂಪದಲ್ಲಿ ವಾಸ್ತವದ ಸ್ವರೂಪ ಪಡೆದುಕೊಂಡಿದೆ.

ಕಾರ್ಮಿಕ ವಿವಾದಗಳ ಕಾಯ್ದೆ ಪ್ರಕಾರ 50 ಜನ ಮೀರಿರುವ ಸಂಸ್ಥೆಯನ್ನು ಮುಚ್ಚುವ ಮುನ್ನ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕಿದೆ. ಇದನ್ನೀಗ ‘ಸನ್ ನೆಟ್ವರ್ಕ್’ ಪಾಲಿಸಿದೆ. ಜತೆಗೆ, ‘ಸಾಕಷ್ಟು ಬಂಡವಾಳ ಹೂಡಿಕೆ ಮಾಡಿದರೂ, ನಷ್ಟದಲ್ಲಿರುವ ಸಂಸ್ಥೆ’ಯನ್ನು ಮುಚ್ಚುವುದಾಗಿ ಕಾರಣವನ್ನೂ ನೀಡಿದೆ.

 “ಮಾರನ್ ದಂಪತಿ ಸಂಸ್ಥೆಯಿಂದ ಪಡೆದ ಸಂಬಳ, ಭತ್ಯೆಗಳಿಗೆ ಹೋಲಿಸಿದರೆ ಉದಯ ನ್ಯೂಸ್ ಕಾರ್ಯಾಚರಣೆಗೆ ಖರ್ಚಾಗುತ್ತಿರುವುದು ಅತ್ಯಂತ ಕಡಿಮೆ ಹಣ.

ಮಾರನ್ ಮಗಳ ಪಾಕೆಟ್ ಮನಿಯಲ್ಲಿ ಈ ವಾಹಿನಿಯನ್ನು ಮುನ್ನಡೆಸಬಹುದು,” ಎನ್ನುತ್ತಾರೆ ವಾಹಿನಿಯ ಜತೆ ಹಲವು ವರ್ಷಗಳ ಒಡನಾಟ ಹೊಂದಿರುವ ಪತ್ರಕರ್ತರೊಬ್ಬರು.

ಮುಂದೆ ಏನಾಗಬಹುದು…

2010ರಲ್ಲಿ ಕರ್ನಾಟಕದಲ್ಲಿಯೂ ಉದಯ ಟಿವಿ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದರು. “ಆ ದಿನಗಳಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದೆವು. ನಮ್ಮ ನಾಯಕತ್ವವಹಿಸಿಕೊಂಡ ಕೆಲವರು ಕೊನೆಗೆ ಆಡಳಿತ ಮಂಡಳಿ ಜತೆ ಒಳ ಒಪ್ಪಂದ ಮಾಡಿಕೊಂಡು ಉದ್ಯೋಗಿಗಳನ್ನು ನಡು ನೀರಿನಲ್ಲಿ ಕೈಬಿಟ್ಟರು. ಹೀಗಾಗಿ ಈ ಬಾರಿ ಏನಾಗುತ್ತೆ ಎಂದು ಹೇಳಲು ಸಾಧ್ಯವಿಲ್ಲ.

ಈಗ ನೋಟಿಸ್ ನೀಡಿರುವುದನ್ನು ನೋಡಿದರೆ, ಆಡಳಿತ ಮಂಡಳಿ ಉದ್ಯೋಗಿಗಳ ಮುಂದಿನ ನಡೆ ಏನು ಎಂಬುದನ್ನು ಗಮನಿಸುವ ತಂತ್ರವೂ ಆಗಿರಬಹುದು. ಇಲ್ಲಿ 73 ಸಿಬ್ಬಂದಿಗಳಿದ್ದರೂ ಪೂರ್ಣ ಪ್ರಮಾಣದ ಸಿಬ್ಬಂದಿಗಳ ಸಂಖ್ಯೆ 20 ದಾಟುವುದಿಲ್ಲ,” ಎನ್ನುತ್ತಾರೆ ಉಯದ ನ್ಯೂಸ್ ನ ಮತ್ತೊಬ್ಬ ಹಿರಿಯ ಉದ್ಯೋಗಿ ಒಬ್ಬರು.

ಒಂದು ಬೃಹತ್ ಕಾರ್ಪೊರೇಟ್ ಸಂಸ್ಥೆ, ವರ್ಷದಿಂದ ವರ್ಷಕ್ಕೆ ನಿವ್ವಳ ಲಾಭವನ್ನು ಘೋಷಿಸಿಕೊಂಡು ಬರುತ್ತಿರುವ ಸಾಮ್ರಾಜ್ಯ, ಕೋಟಿ ಲೆಕ್ಕದಲ್ಲಿ ಸಂಬಳ, ಭತ್ಯೆಗಳನ್ನು ಪಡೆಯುವ ಅದರ ಮಾಲೀಕರು ಹೀಗೆ ಕೆಳಹಂತದ ವಿಚಾರದಲ್ಲಿ ಹೀನಾಯವಾಗಿ ನಡೆದುಕೊಳ್ಳುತ್ತಾರೆ ಎಂಬುದನ್ನು ಈ ಬೆಳವಣಿಗೆ ಸ್ಪಷ್ಟವಾಗಿ ಬಿಡಿಸಿಡುತ್ತಿದೆ.

ಸುದ್ದಿವಲಯದ ಸಹೋದ್ಯೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು..?

ಊರ ತುಂಬಾ ಅನ್ಯಾಯಗಳು ನಡೆದಾಗ ಧ್ವನಿ ಎತ್ತುತ್ತೀವಿ ಎನ್ನುವ ಮಾಧ್ಯಮಗಳು, ತಮ್ಮದೇ ವಲಯದ ಸಹೋದ್ಯೋಗಿಗಳು ಸಂಕಷ್ಟಕ್ಕೆ ಸಿಕ್ಕಾಗ ಮೌನಕ್ಕೆ ಶರಣಾಗುತ್ತವೆ. ಇದಕ್ಕಿಂತ ಕ್ರೂರವಾದುದ್ದು ಏನೆಂದರೆ, ಒಂದು ವೇಳೆ ಅನ್ಯಾಯವನ್ನು ಪ್ರಶ್ನಿಸಿದರೆ, ಅಂತಹ ಪತ್ರಕರ್ತರನ್ನು ಹಣಿಯುವ ಮಟ್ಟಕ್ಕೂ ಇಳಿದು ಬಿಡುತ್ತಾರೆ. ಇಂತಹ ಅಸಹ್ಯಕರ ಇತಿಹಾಸಗಳನ್ನು ಹೊಂದಿರುವ ಕನ್ನಡ ಸುದ್ದಿ ವಾಹಿನಿಗಳ ಲೋಕದಲ್ಲಿ ಈಗ ಅಭದ್ರತೆಯ ಭಾವಗಳನ್ನು ‘ಉದಯ ನ್ಯೂಸ್’ ಸಿಬ್ಬಂದಿಗಳು ಎದುರಿಸುತ್ತಿದ್ದಾರೆ.

ಮೂಲ

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…